ಎಲ್ಲರಿಗೂ ನಮಸ್ಕಾರ, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಹಣ ನಿಮಗೆ ಜಮ ಆಗಿಲ್ಲವೇ..? ಅರ್ಜಿ ಸಲ್ಲಿಸಿದರು ಹಣ ಸಂದಾಯ ಆಗದೆ ಇರುವವರಿಗೆ ಇಲ್ಲಿದೆ ಸರ್ಕಾರದಿಂದ ಹೊಸ ಮಾಹಿತಿ ಓದಿರಿ.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಹಣ ಬಾರದೇ ಇದ್ದವರಿಗೆ ಈ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದರು ಹಣ ಬರುತ್ತಿಲ್ಲ ಎಂದು ದೂರು ಕೇಳಿಬರುತ್ತಿವೆ.
Gruhalakshmi Scheme Update:
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಯಜಮಾನಿಯರು 2000 ರೂ. ಹಣ ಬಾರದೆ ಇದ್ದವರು ಕೆಲವು ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸರ್ಕಾರ ತಿಳಿಸಿದೆ. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕು. ರೇಷನ್ ಕಾರ್ಡ್ ನಲ್ಲಿರೋ ಪ್ರತಿಯೊಬ್ಬ ಸದಸ್ಯರ ಕೆವೈಸಿ ಅಪ್ ಡೇಟ್ ಆಗಿರಬೇಕು.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು NPCI ಮಾಡಿಸೋದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಯಲ್ಲಿನ ಹೆಸರು, ಆಧಾರ್ ಕಾರ್ಡ್ ನಲ್ಲಿನ ಹೆಸರು ಒಂದೇ ಆಗಿದ್ಯಾ ಅಂತ ಚೆಕ್ ಮಾಡಿ. ತಪ್ಪಿದ್ದರೇ ಅದನ್ನು ತಿದ್ದುಪಡಿ ಮಾಡಿಸಿಕೊಳ್ಳಿ.
ಈ ಮೇಲಿನ ಎಲ್ಲಾ ತಾಂತ್ರಿಕ ಸಮಸ್ಯೆಯನ್ನು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಸರಿಪಡಿಸಿಕೊಂಡರೆ ಅವರಿಗೆ ಪ್ರತಿ ತಿಂಗಳು 2000 ರೂ. ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಅಂತ ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ.
ಇತರೆ ಮಾಹಿತಿಗಳನ್ನು ಓದಿ:
ರೇಷನ್ ಕಾರ್ಡ್ Status Check ಮಾಡಿ
ಬೆಳೆ ಪರಿಹಾರ ಜಮಾ ಮೊಬೈಲ್ನಲ್ಲೇ Status Check ಮಾಡಿ
2 thoughts on “ಗೃಹಲಕ್ಷ್ಮೀ ಯೋಜನೆಯ 2000 ರೂ. ಹಣ ಬಂದಿಲ್ಲವೇ..? ಸರ್ಕಾರದಿಂದ ಹೊಸ ಅಪಡೇಟ್ | Gruhalakshmi Scheme New Update From Karnataka Government”