New Ration Card: ಹೊಸ BPL ರೇಷನ್ ಕಾರ್ಡ್ ಪಡೆಯುವ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡ ಹೊಸ ರೇಷನ್ ಕಾರ್ಡ್ (New Ration Card) ಪಡೆಯುವ ನಿರೀಕ್ಷೆಯಲ್ಲಿದ್ದೀರಾ..? ಹಾಗಿದ್ದರೇ ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಅಧಿಕಾರಗಳಿಗೆ ಸೂಚನೆ ನೀಡಿದ್ದಾರೆ.

ಅನರ್ಹ BPL ಕಾರ್ಡ್ ಹೊಂದಿರುವವರನ್ನು ಗುರುತಿಸಿ ಅವರ ಪಡಿತರ ಚೀಟಿಯನ್ನು ರದ್ದು ಪಡಿಸಬೇಕು ಎಂದು ವಿಧಾನಸೌಧದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

New Ration Card Update Karnataka:

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಶೇಕಡಾ 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ತಮಿಳುನಾಡಿನಲ್ಲಿ ಶೇಕಡಾ 40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇಕಡಾ 5.67 ಇರಬೇಕು ಎಂದು ತಿಳಿಸಿದರು. 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ.

ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಹಳ ದಿನಗಳಿಂದ ಅರ್ಹ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ (New Ration Card) ಪಡೆಯಲು ಕಾಯುತ್ತಿದ್ದಾರೆ. ಆದರೆ ಅನರ್ಹರು ಸರ್ಕಾರದಿಂದ ಲಾಭ ಪಡೆಯುತ್ತಿದ್ದಾರೆ. ಅಂತವರ ಪಡಿತರ ಚೀಟಿಗಳನ್ನು ರದ್ದು ಮಾಡಿ. ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಸರ್ಕಾರ ಆದಷ್ಟು ಬೇಗ ಈ ಕೆಲಸ ಮಾಡಿದರೆ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತವೆ.

ಇತರೆ ಮಾಹಿತಿಗಳನ್ನು ಓದಿ:

ರೇಷನ್ ಕಾರ್ಡ್ ತಿದ್ದುಪಡಿ ಆರಂಭ

ಗೃಹಲಕ್ಷ್ಮಿ DBT Status Check ಮಾಡಿ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ

Leave a Comment

error: Content is protected !!