ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ | Swavalambi Sarathi Scheme 2024 Karnataka Online Application @sevasindhu.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಕೂಡ ವಾಹನ ಚಾಲಕರಾ..? ಸರ್ಕಾರದಿಂದ ಸಬ್ಸಿಡಿ ಪಡೆದು ವಾಹನ ಖರೀದಿಸಬೇಕಾ..? ಹಾಗಿದ್ದರೇ ಈ ಲೇಖನ ನಿಮಗಾಗಿ. ಇಲ್ಲಿ ಸ್ವಾವಲಂಬಿ ಸಾರಥಿ ಯೋಜನೆ (Swavalambi Sarathi Scheme Karnataka) ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ ಓದಿ ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯ ಪಡೆಯಿರಿ.

Vehicle Subsidy Scheme Karnataka:

ಯೋಜನೆಯ ಹೆಸರು: ಸ್ವಾವಲಂಬಿ ಸಾರಥಿ ಯೋಜನೆ (Swawalambi Sarathi)
ಸಹಾಯಧನ ಮೊತ್ತ: ವಾಹನದ ಮೌಲ್ಯದ ಶೇ.50 ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ವರೆಗೆ
ಅರ್ಜಿದಾರರ ವಯಸ್ಸು: 21 ರಿಂದ 45 ವರ್ಷ

Swavalambi Sarathi Scheme ವಿವರ:

ನಿರುದ್ಯೋಗಿ ಯುವ ಜನರಿಗೆ ಸ್ವಯಂ ಉದ್ಯೋಗ ಮಾಡಲು ಸ್ವಾವಲಂಬಿ ಸಾರಥಿ ಯೋಜನೆಯ ಅಡಿಯಲ್ಲಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಗಾಗಿ ಬ್ಯಾಂಕ್‌ಗಳಿಂದ ಪಡೆಯುವಂತ ಸಾಲದ ಶೇ.50 ರಷ್ಟು ಅಥವಾ ಗರಿಷ್ಟ 3 ಲಕ್ಷ ರೂಪಾಯಿಗಳ (ಈ ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು) ಸಹಾಯಧನವನ್ನು ನಿಗಮಗಳ ವತಿಯಿಂದ ಮಂಜೂರು ಮಾಡುತ್ತಾರೆ.

Swavalambi Sarathi ಅರ್ಹತೆಗಳು:

ಸ್ವಾವಲಂಬಿ ಸಾರಥಿ ಯೋಜನೆಯಡಿ ಸೌಲಭ್ಯ ಪಡೆಯ ಬಯಸುವವರು ಈ ಕೇಳಗಿನ ಅರ್ಹತೆಯನ್ನು ಹೊಂದಿರಬೇಕು.

  • ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪುದೇಶದವರಿಗೆ 98,000 ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂ. ಗಳ ಒಳಗಿರಬೇಕು.
  • ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.
  • ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
  • ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
  • ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
  • ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.
  • ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸೈಂ ಟ್ಯಾಕ್ಸಿ ಚಾಲನೆ (Yellow Board) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು.
  • ಈ ಯೋಜನೆಯಡಿ
  • ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯುವುದು. ಈ ಸಾಲಕ್ಕೆ ಬ್ಯಾಂಕ್ / ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು
  • ಪಾವತಿಸಬೇಕು.

Swavalambi Sarathi Scheme ದಾಖಲೆಗಳು:

  • ಜಾತಿ ಪ್ರಮಾಣಪತ್ರ (Caste Certificate)
  • ಆದಾಯ ಪ್ರಮಾಣಪತ್ರ (Income Certificate)
  • ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
  • ವಾಹನ ಚಾಲನಾ ಪರವಾನಗಿ (Driving Licence) ಪ್ರತಿ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ವಾಹನದ ಅಂದಾಜು ದರಪಟ್ಟಿ
  • ಸ್ವಯಂ ಘೋಷಣೆ ಪತ್ರ
  • ಫಲಾನುಭವಿಯ ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಅರ್ಜಿದಾರರ ಮತ್ತು ಕುಟುಂಬದ ಸದಸ್ಯರು ವಾಹನ ಖರೀದಿಗೆ ರಾಜ್ಯ ಸರ್ಕಾರದ ಯಾವುದೇ ಯೋಜನೆಯಡಿ ಸಾಲ ಸೌಲಭ್ಯ ಪಡೆದಿಲ್ಲದಿರುವ ಬಗ್ಗೆ ಜಿಲ್ಲಾ ವ್ಯವಸ್ಥಾಪಕರಿಂದ ದೃಢೀಕರಣ ಪತ್ರ
  • ಈ ಯೋಜನೆಯಡಿ ಪಡೆದ ವಾಹನವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ದೃಢೀಕರಣ ಪತ್ರ
  • ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. (ಸ್ವಯಂ ಘೋಷಣಾ ಪತ್ರ ಸಲ್ಲಿಸುವುದು).

Swavalambi Sarathi Scheme in Karnataka: ಯಾರು ಅರ್ಜಿ ಸಲ್ಲಿಸಬಹುದು?

2024-2025 ನೇ ಸಾಲಿನಲ್ಲಿ ಈ ಕೇಳಗಿನ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿದಾರಿಂದ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

  • ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿ.
  • ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ.
  • ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
  • ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ
  • ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತ
  • ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ
  • ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
  • ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ
  • ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ
  • ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತ

Vehicle Subsidy Scheme Karnataka 2024 ಅರ್ಜಿ ಸಲ್ಲಿಕೆ ಹೇಗೆ?
ಅಗತ್ಯ ದಾಖಲೆಗಳೊಂದಿಗೆ ಅರ್ಹ ಅರ್ಜಿದಾರರು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಲಿಂಕ್‌ನ್ನು ಕೇಳಗೆ ನೀಡಲಾಗಿದೆ. ಅಥವಾ ಗ್ರಾಮ ಒನ್‌, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

Swavalambi Sarathi Scheme Karnataka Application Link:
ಆನ್‌ಲೈನ್‌ ಅರ್ಜಿ ಲಿಂಕ್‌:
ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್:‌ sevasindhu.karnataka.gov.in, sevasindhuservices.karnataka.gov.in

Swavalambi Sarathi Scheme last date:

ಅರ್ಜಿ ಸಲ್ಲಿಸಲು ಈ ಕೇಳಗಿನ ನಿಗಮಗಳಿಗೆ ಅನುಗುಣವಾಗಿ ಕೊನೆಯ ದಿನಾಂಕಗಳನ್ನು ನಿಗದಿ ಮಾಡಲಾಗಿದೆ.

  • ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: 31-08-2024
  • ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: 31-08-2024
  • ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: 31-08-2024
  • ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: 30-08-2024
  • ಸವಿತಾ ಸಮಾಜ ಅಭಿವೃದ್ಧಿ ನಿಗಮ: 31-08-2024
  • ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ: 31-08-2024
  • ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: 31-08-2024
  • ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ: 31-08-2024
  • ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ: 31-08-2024
  • ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ: 30-08-2024
Swavalambi Sarathi Scheme Karnataka

ವಿಷೇಶ ಸೂಚನೆಗಳು:

  • ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
  • ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
  • ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
  • 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ನಿಯಮಗಳು: ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸಲಾಗುತ್ತದೆ.

ಇತರೆ ಮಾಹಿತಿಗಳನ್ನು ಓದಿ:

ಉಚಿತ ಬೋರ್‌ವೇಲ್: ಗಂಗಾ ಕಲ್ಯಾಣ ಯೋಜನೆಗಾಗಿ ಅರ್ಜಿ ಆಹ್ವಾನ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ

Leave a Comment

error: Content is protected !!